top of page

ಇಂದು ಅರಂತೋಡು - ತೊಡಿಕಾನ ಪ್ರಾ.ಕೃ.ಪ.ಸ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ

ಇಂದು ಅರಂತೋಡು - ತೊಡಿಕಾನ ಪ್ರಾ.ಕೃ.ಪ.ಸ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ

ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ ಹಾಗೂ ಉಪಾಧ್ಯಕ್ಷರಾಗಿ ಡಾ.ಲಕ್ಷ್ಮೀಶ ಕಲ್ಲುಮುಟ್ಟು ಆಯ್ಕೆ ಸಾಧ್ಯತೆ

ಅರಂತೋಡು - ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇಂದು ನಡೆಯಲಿದ್ದು, ಅಧ್ಯಕ್ಷರಾಗಿ ಎರಡುವರೆ ವರ್ಷದ ಅವಧಿಗೆ ಸಂತೋಷ್ ಕುತ್ತಮೊಟ್ಟೆ ಆಯ್ಕೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಉಪಾಧ್ಯಕ್ಷರಾಗಿ ಯುವ ವೈದ್ಯ ಡಾ.ಲಕ್ಷ್ಮೀಶ ಕಲ್ಲುಮುಟ್ಟು ಆಯ್ಕೆಯಾಗಲಿದ್ದಾರೆ.

ಬಿಜೆಪಿ ಮಂಡಲ ನಾಯಕರುಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲದಿಂದ ತಿಳಿದು ಬಂದಿದೆ.

ನಿರ್ದೇಶಕರುಗಳ ಸ್ಥಾನಕ್ಕೆ ಡಿ.28ರಂದು ನಡೆದ ಚುನಾವಣೆಯಲ್ಲಿ ಎಲ್ಲಾ 12 ನಿರ್ದೇಶಕ ಸ್ಥಾನಗಳನ್ನು ಗೆಲ್ಲುವ ಮೂಲಕ ಸಂತೋಷ್ ಕುತ್ತಮೊಟ್ಟೆ ನೇತೃತ್ವದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಕ್ಲೀನ್ ಸ್ವೀಪ್ ಸಾಧಿಸಿದ್ದರು.

ಇಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ ಸಂತೋಷ್ ಕುತ್ತಮೊಟ್ಟೆ 681, ದಯಾನಂದ ಕುರುಂಜಿ 637, ಚಂದ್ರಶೇಖರ ಚೋಡಿಪಣೆ 633, ಶಿವಾನಂದ ಕುಕ್ಕುಂಬಳ 599, ಉದಯಕುಮಾ‌ರ್ ಉಳುವಾರು 564 ಮತ ಪಡೆದು ಗೆಲುವು ಸಾಧಿಸಿದ್ದಾರೆ.

ಸಾಲಗಾರರಲ್ಲದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಶಾಂತ್ ಕಾಪಿಲ 162 ಮತ ಪಡೆದು ಗೆಲುವು ಸಾಧಿಸಿದ್ದಾರೆ.

ಸಾಲಗಾರರ ಸಾಮಾನ್ಯ ಮಹಿಳಾ ಕ್ಷೇತ್ರದಿಂದ ಬಿಜೆಪಿ ಬೆಂಬಲಿತರಾದ ಶ್ರೀಲತಾ ದೇರಾಜೆ 684, ಲೋಚನ ಕೊಳಲುಮೂಲೆ 623, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಬಿಜೆಪಿಯ ದಿನೇಶ್‌ ಅರಮನೆಗಯ 663, ಪರಿಶಿಷ್ಟ ಜಾತಿಯಿಂದ ಬಿಜೆಪಿಯ ಪದ್ಮಯ್ಯ ಅಡ್ಯಡ್ಕ 649, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಬಿಜೆಪಿಯ ಚಂದ್ರಶೇಖರ ತೊಡಿಕಾನ 576, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಬಿಜೆಪಿಯ ಡಾ. ಲಕ್ಷ್ಮೀಶ ಕಲ್ಲುಮುಟ್ಟು 702 ಮತ ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ.

 
 
 

Comments


Top Stories

Stay updated with the latest news and stories from Karnataka. Subscribe to our newsletter for weekly updates.

© 2024 by NANU PATRAKARTHA. All rights reserved.

bottom of page