top of page

ಅಡಿಕೆ ಎಲೆಚುಕ್ಕೆ ರೋಗ : ಪರಿಹಾರಕ್ಕಾಗಿ ಕೇಂದ್ರಕ್ಕೆ 225 ಕೋಟಿ ರೂಪಾಯಿ ಪ್ರಸ್ತಾವನೆ

ಅಡಿಕೆ ಎಲೆಚುಕ್ಕೆ ರೋಗ : ಪರಿಹಾರಕ್ಕಾಗಿ ಕೇಂದ್ರಕ್ಕೆ 225 ಕೋಟಿ ರೂಪಾಯಿ ಪ್ರಸ್ತಾವನೆ

ಅಡಿಕೆ ಕೃಷಿಕರನ್ನು ಕಂಗೆಡಿಸಿರುವ ಎಲೆಚುಕ್ಕೆ ಹಾಗೂ ಹಳದಿ ಎಲೆ ರೋಗ ತಡೆಗೆ ಸಂಬಂಧಿಸಿ ಸುಮಾರು 54 ಸಾವಿರ ಹೆಕ್ಟೇರ್‌ನಲ್ಲಿ ಗಿಡ ಸಂರಕ್ಷಣೆಗಾಗಿ 225 ಕೋಟಿ ರೂ.ಗಳ ಪರಿಹಾರ ಒದಗಿಸುವಂತೆ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನ ಸಂಸ್ಥೆ (ಸಿಪಿಸಿಆರ್‌ಐ)ಯ ಮೂಲಕ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸ ಲಾಗಿದೆ. ಅದು ಪರಿಶೀಲನೆ ಹಂತ ದಲ್ಲಿದೆ ಎಂದು ಮೂಲಗಳು ತಿಳಿಸಿದ್ದು, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕರ ಹಂತದಲ್ಲಿ ಹಲವು ಕ್ರಮ ಗಳು ತೆಗೆದುಕೊಂಡಾಗ್ಯೂ ಪ್ರಸ್ತುತ ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದ ಅಡಿಕೆ ಬೆಳೆಯುವ ಪ್ರಮುಖ 7 ಜಿಲ್ಲೆಗಳ 53,997 ಹೆಕ್ಟೇರ್‌ ಪ್ರದೇಶ ದಲ್ಲಿ ರೋಗ ಕಾಣಿಸಿಕೊಂಡಿರುವುದು ಬೆಳೆಗಾರರಲ್ಲಿ ಇನ್ನಷ್ಟು ಆತಂಕ ಸೃಷ್ಟಿಸಿದೆ. ರೋಗ ಬಾಧಿತ ಗಿಡದ ಎಲೆ ಸಂಪೂರ್ಣ ಒಣಗಿ ಇಳುವರಿ ಕುಸಿಯುತ್ತದೆ.

ಸಮಿತಿಯ ಶಿಫಾರಸ್ಸಿನಂತೆ ಫೈಟೋಸ್ಯಾನಿಟರಿ (ರೋಗ ಬಾಧಿತ ಸಸ್ಯದ ಭಾಗವನ್ನು ತೆಗೆದು ಮತ್ತು ನಾಶಪಡಿಸುವುದು) ಕ್ರಮಗಳ ಅಳವಡಿಕೆ, ಪೋಷಕಾಂಶ ನಿರ್ವಹಣೆ, ಸಸ್ಯ ಸಂರಕ್ಷಣೆ ಕ್ರಮಗಳ ಅಳವಡಿಕೆ ಹಾಗೂ ತಾಂತ್ರಿಕ ಮಾಹಿತಿ ಕುರಿತು ಬೆಳೆಗಾರರಲ್ಲಿ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದ್ದು, ರೋಗ ನಿಯಂತ್ರಣಕ್ಕೆ ಕೇಂದ್ರ ಸರಕಾರ ನೇಮಿಸಿರುವ ವೈಜ್ಞಾನಿಕ ತಜ್ಞರನ್ನು ಒಳಗೊಂಡ ಸಮಿತಿಯು ಈಗಾಗಲೇ ಚಿಕ್ಕಮಗಳೂರು, ಶಿವಮೊಗ್ಗ, ದ.ಕ. ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆಯ ಪರಿಹಾರಕ್ಕೆ ಕೆಲವು ಶಿಫಾರಸುಗಳನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದೆ.

Comments


Top Stories

Stay updated with the latest news and stories from Karnataka. Subscribe to our newsletter for weekly updates.

© 2024 by NANU PATRAKARTHA. All rights reserved.

bottom of page