top of page

ದ್ವಿತೀಯ ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಊರೂರು ಸುತ್ತಿದ್ದ ದಿಗಂತ್...!!

ದ್ವಿತೀಯ ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಊರೂರು ಸುತ್ತಿದ್ದ ದಿಗಂತ್...!!

ree

ನಿಗೂಢವಾಗಿ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌ ವಿದ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಹೋಗಿರುವುದಾಗಿ ಪೊಲೀಸರಿಗೆ ದಿಗಂತ್​ ಹೇಳಿದ್ದಾರೆ.

ನಾಪತ್ತೆಯಾದ ದಿನ ಮನೆ ಬಳಿ ರೈಲ್ವೆ ಟ್ರ್ಯಾಕ್​ ಬಳಿ ಹೋಗಿದ್ದ ದಿಗಂತ್, ಅಲ್ಲಿ ಚಪ್ಪಲಿ ಬಿಚ್ಚಿಟ್ಟು ಶೂ ಹಾಕಿಕೊಂಡಿದ್ದಾರೆ. ಬಳಿಕ, ಅಪರಿಚಿತರ ಬೈಕ್​ ಏರಿ ಮಂಗಳೂರಿಗೆ ಹೋಗಿದ್ದಾರೆ. ಮಂಗಳೂರಿನಿಂದ ಬಸ್ ಮೂಲಕ​ ಶಿವಮೊಗ್ಗ ತಲುಪಿ, ಬಳಿಕ ಶಿವಮೊಗ್ಗದಿಂದ ಮೈಸೂರಿಗೆ ಹೋಗಿದ್ದಾರೆ. ಮೈಸೂರಿನಲ್ಲಿ ಟ್ರೈನ್​ ಹತ್ತಿ ಬೆಂಗಳೂರಿಗೆ ಹೋಗಿದ್ದಾರೆ. ನಂದಿಬೆಟ್ಟಕ್ಕೆ ತೆರಳಿ, ಅಲ್ಲಿಯ ಹೊಟೇಲ್​ ಒಂದರಲ್ಲಿ ಮೂರು ದಿನ ಕೆಲಸ ಮಾಡಿ 3000 ಸಂಪಾದನೆ ಮಾಡಿದ್ದಾರೆ.

ನಂತರ ವಿವಿಧ ಕಡೆ ಸುತ್ತಾಟ ನಡೆಸಿ, ಶನಿವಾರ(ಮಾ.08) ರಂದು ಬೆಂಗಳೂರಿನಲ್ಲಿ ಮುರುಡೇಶ್ವರ ಎಕ್ಸ್‌ಪ್ರೆಸ್ ಟ್ರೈನ್​ ಹತ್ತಿ ಉಡುಪಿಗೆ ತುಲುಪಿದ್ದಾರೆ.

ಫೆಬ್ರವರಿ 25ರಂದು ನಾಪತ್ತೆಯಾಗಿದ್ದ ದಿಗಂತ್​ ಬರೊಬ್ಬರಿ 10 ದಿನಗಳ ಬಳಿಕ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ. ದಿಗಂತ್​ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ree

Comments

Couldn’t Load Comments
It looks like there was a technical problem. Try reconnecting or refreshing the page.

Top Stories

Stay updated with the latest news and stories from Karnataka. Subscribe to our newsletter for weekly updates.

© 2024 by NANU PATRAKARTHA. All rights reserved.

bottom of page