top of page

15 ನಿಮಿಷವಾದರೂ ಓಪನ್ ಆಗದ ಆ್ಯಂಬುಲೆನ್ಸ್ ಬಾಗಿಲು ; ಆಕ್ಸಿಜನ್ ಇಲ್ಲದೆ ರೋಗಿ ಸಾವು

15 ನಿಮಿಷವಾದರೂ ಓಪನ್ ಆಗದ ಆ್ಯಂಬುಲೆನ್ಸ್ ಬಾಗಿಲು ; ಆಕ್ಸಿಜನ್ ಇಲ್ಲದೆ ರೋಗಿ ಸಾವು

ಜೈಪುರ: ರಾಜಸ್ಥಾನದ ಭಿಲ್ವಾರಾದಲ್ಲಿ ಮಹಿಳೆಯೊಬ್ಬರು ದುರಂತವಾಗಿ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಅವರ ಮನೆಯವರು ಆ್ಯಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅಚಾತುರ್ಯವೊಂದು ನಡೆದಿದೆ. ಆಕೆಯನ್ನು ಕರೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್ ಆಸ್ಪತ್ರೆ ತಲುಪಿದಾಗ ಆ ಆ್ಯಂಬುಲೆನ್ಸ್‌ನ ಬಾಗಿಲು ಸುಮಾರು 15 ನಿಮಿಷಗಳ ಕಾಲ ತೆರೆಯಲಿಲ್ಲ. ಇದರಿಂದಾಗಿ ಮಹಿಳೆಗೆ ಚಿಕಿತ್ಸೆ ನೀಡಲು ವಿಳಂಬವಾಯಿತು. ಆ್ಯಂಬುಲೆನ್ಸ್​ ಬಾಗಿಲು ತೆರೆಯುವಷ್ಟರಲ್ಲಿ ಆ ಮಹಿಳೆ ಒಳಗೇ ಸಾವನ್ನಪ್ಪಿದ್ದರು ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇದರ ಜೊತೆಗೆ, ಆ್ಯಂಬುಲೆನ್ಸ್‌ನಲ್ಲಿ ಆಮ್ಲಜನಕ ಸೌಲಭ್ಯವಿರಲಿಲ್ಲ ಎಂಬ ಆರೋಪವೂ ಇದೆ.

ರಾಜಸ್ಥಾನದ ಭಿಲ್ವಾರಾದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲಿನ ಮಹಿಳೆಯೊಬ್ಬರು ಯಾವುದೋ ಸಮಸ್ಯೆಯಿಂದ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದರು. ಮಹಿಳೆಯ ಆತ್ಮಹತ್ಯಾ ಪ್ರಯತ್ನದ ಬಗ್ಗೆ ಆಕೆಯ ಕುಟುಂಬಕ್ಕೆ ತಿಳಿದುಬಂದಿತು. ಅವರು ತಕ್ಷಣ ಆ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್‌ಗೆ ಕರೆ ಮಾಡಿದರು. ಆಸ್ಪತ್ರೆ ತಲುಪಿದಾಗ ಆ್ಯಂಬುಲೆನ್ಸ್ ಬಾಗಿಲು ತೆರೆದಾಗ ಅದು ತೆರೆಯಲಿಲ್ಲ. ಆ್ಯಂಬುಲೆನ್ಸ್​ನ ಬಾಗಿಲು ಸಿಕ್ಕಿಹಾಕಿಕೊಂಡಿತು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಆ್ಯಂಬುಲೆನ್ಸ್​ ಬಾಗಿಲು ಓಪನ್ ಮಾಡಲು 15 ನಿಮಿಷ ಪ್ರಯತ್ನಪಟ್ಟರೂ ಸಾಧ್ಯವಾಗದೆ ಇದ್ದಾಗ ಕಿಟಕಿ ಒಡೆದು ಒಳಗಿದ್ದ ಆ ಮಹಿಳೆಯನ್ನು ಹೊರಗೆಳೆದರು. ಅಷ್ಟರಲ್ಲಿ ಆ ಮಹಿಳೆ ಸಾವನ್ನಪ್ಪಿದ್ದರು. ಆಂಬ್ಯುಲೆನ್ಸ್ ಒಳಗೆ ಆಮ್ಲಜನಕ ಕೂಡ ಇರಲಿಲ್ಲ ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿಗೆ ಆಸ್ಪತ್ರೆಗೆ ಹೋಗುವ ದಾರಿಯೂ ತಿಳಿದಿರಲಿಲ್ಲ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ಇದರಿಂದಾಗಿ, ಆ ಮಹಿಳೆಗೆ ಚಿಕಿತ್ಸೆ ನೀಡಲು ಹೆಚ್ಚಿನ ವಿಳಂಬವಾಯಿತು.

Comentarios


Top Stories

Stay updated with the latest news and stories from Karnataka. Subscribe to our newsletter for weekly updates.

© 2024 by NANU PATRAKARTHA. All rights reserved.

bottom of page