top of page

ಮಹಾಕುಂಭ ಮೇಳ, ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಪ್ರಧಾನಿ ಮೋದಿ

ಮಹಾಕುಂಭ ಮೇಳ, ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ. ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮಿಂದೆದ್ದಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಪ್ರಧಾನಿ ಮೋದಿಯವರೊಂದಿಗೆ ಹಾಜರಿದ್ದರು. ಜನವರಿ 13 ರಂದು ಪ್ರಾರಂಭವಾದ ಮಹಾಕುಂಭದಲ್ಲಿ ಇಲ್ಲಿಯವರೆಗೆ 14 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ.

ಇವರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಕಿರಣ್ ರಿಜಿಜು, ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ನಾಯಕರು ಕೂಡ ಪವಿತ್ರ ಸ್ನಾನ ಮಾಡಿದ್ದಾರೆ. ಇದಲ್ಲದೆ ಅನೇಕ ದೇಶಗಳ ಪ್ರತಿನಿಧಿಗಳು ಕೂಡ ಆಗಮಿಸಿದ್ದರು.

ಮೂರು ದಿನಗಳ ಹಿಂದೆ, ಫೆಬ್ರವರಿ 1 ರಂದು, 77 ದೇಶಗಳ 118 ಸದಸ್ಯರ ನಿಯೋಗವು ಮಹಾ ಕುಂಭದಲ್ಲಿ ಪವಿತ್ರ ಸ್ನಾನ ಮಾಡಿತು. ಇದರಲ್ಲಿ ಹಲವು ದೇಶಗಳ ರಾಜತಾಂತ್ರಿಕರು ಮತ್ತು ಅವರ ಕುಟುಂಬಗಳು ಸೇರಿದ್ದಾರೆ. ಮಹಾ ಕುಂಭ ಮೇಳದಲ್ಲಿ ಭಾಗವಹಿಸಿದ 77 ದೇಶಗಳಲ್ಲಿ ರಷ್ಯಾ, ಮಲೇಷ್ಯಾ, ಬೊಲಿವಿಯಾ, ಜಿಂಬಾಬ್ವೆ, ಲಾಟ್ವಿಯಾ, ಉರುಗ್ವೆ, ನೆದರ್‌ಲ್ಯಾಂಡ್ಸ್, ಮಂಗೋಲಿಯಾ, ಇಟಲಿ, ಜಪಾನ್, ಜರ್ಮನಿ, ಜಮೈಕಾ, ಅಮೆರಿಕ, ಸ್ವಿಟ್ಜರ್‌ಲ್ಯಾಂಡ್, ಸ್ವೀಡನ್, ಪೋಲೆಂಡ್, ಕ್ಯಾಮರೂನ್, ಉಕ್ರೇನ್, ಸ್ಲೊವೇನಿಯಾ ಮತ್ತು ಅರ್ಜೆಂಟೀನಾ ಕೂಡ ಸೇರಿದೆ.

Comentários


Top Stories

Stay updated with the latest news and stories from Karnataka. Subscribe to our newsletter for weekly updates.

© 2024 by NANU PATRAKARTHA. All rights reserved.

bottom of page